ಬೈಕ್ ಢಿಕ್ಕಿ: ಪಾದಚಾರಿಗೆ ಗಾಯ
Update: 2016-08-28 18:34 GMT
ಉಪ್ಪಿನಂಗಡಿ, ಆ.28: ಇಲ್ಲಿನ ನೆಲ್ಯಾಡಿ ಸಮೀಪದ ಕೊಲ್ಪೆಎಂಬಲ್ಲಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಗಾಯಗೊಂಡವರನ್ನು ಸೈಯದ್ ಅಬೂಬಕರ್ (49) ಎಂದು ಗುರುತಿಸಲಾಗಿದೆ. ಘಟನೆಗೆ ಕಾರಣವಾದ ಬೈಕ್ ಸವಾರ ಶರೀಫ್ ವಿರುದ್ಧ್ದ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.