ಲಾರಿ ಢಿಕ್ಕಿ: ಮಹಿಳೆ ಮೃತ್ಯು
Update: 2016-08-29 18:32 GMT
ಬೈಂದೂರು, ಆ.29: ಯಡ್ತರೆ ಗ್ರಾಮದ ರಾಹುತನಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆ.28ರಂದು ಬೆಳಗ್ಗೆ 10:15ರ ಸುಮಾರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಡುವರಿ ಗ್ರಾಮದ ತಾರಾಪತಿಯ ಅಣ್ಣಪ್ಪ ಖಾರ್ವಿ ಎಂಬವರ ಪತ್ನಿ ನಾಗು ಖಾರ್ವಿ ಎಂದು ಗುರುತಿಸಲಾಗಿದೆ. ಮೀನು ವ್ಯಾಪಾರ ಮುಗಿಸಿ ಮನೆಗೆ ತೆರಳುವುದಕ್ಕಾಗಿ ರಸ್ತೆ ದಾಟಲು ನಿಂತಿದ್ದ ಇವರಿಗೆ ಬೈಂದೂರು ಜಂಕ್ಷನ್ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ನಾಗು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.