ಪುತ್ತೂರು: ಆದಾಯ ತೆರಿಗೆ ಪಾವತಿಯ ಕುರಿತು ವಿಶೇಷ ಮಾಹಿತಿ ಕಾರ್ಯಕ್ರಮ

Update: 2016-08-30 12:41 GMT

ಪುತ್ತೂರು, ಆ.30: ಆದಾಯ ತೆರಿಗೆ ಪಾವತಿ ಮತ್ತು ಟಿಡಿಎಸ್ ಬಗ್ಗೆ ವಿಶೇಷ ಮಾಹಿತಿ ಕಾರ್ಯಕ್ರಮ ಮಂಗಳವಾರ ಪುತ್ತೂರಿನ ವಕೀಲರ ಸಭಾಭವನದಲ್ಲಿ ನಡೆಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಆದಾಯ ತೆರಿಗೆ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವನ್ನು 5ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ. ರಾಮಚಂದ್ರ ಉದ್ಘಾಟಿಸಿದರು.

ವಕೀಲರ ಸಂಘದ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ ಅಧ್ಯಕ್ಷತೆ ವಹಿಸಿದ್ದರು. ವಕೀಲರಾದ ಕೆ.ಪಿ.ಚಂದ್ರಕುಮಾರ್ ಮತ್ತು ಚಾರ್ಲ್ಸ್ ಡೆರಿಕ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ವಕೀಲರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಸ್ವಾಗತಿಸಿದರು. ಮುರಳೀಕೃಷ್ಣ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News