ಅ.12ರಂದು ರಾಜ್ಯಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

Update: 2016-10-11 15:28 GMT

ಉಡುಪಿ, ಅ.11: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಉಡುಪಿ ಹಾಗೂ ಭಂಡಾರ್ಕಾರ್ಸ್‌ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಅ.13ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ರಂಗ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವಜನಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವಜನಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮ್ವರಾಜ್‌ಉದ್ಘಾಟಿಸುವರು.ಕುಂದಾಪುರಶಾಸಕಹಾಲಾಡಿಶ್ರೀನಿವಾಸಶೆಟ್ಟಿಅ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ವಿಧಾನಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್ ಕೊಟ್ಯಾನ್, ಕುಂದಾಪುರ ತಾಪಂ ಅಧ್ಯಕ್ಷ ಜಯಶ್ರೀ ಸುಧಾಕರ ಮೊಗವೀರ, ಪುರಸಬೆ ಅಧ್ಯಕ್ಷ ವಸಂತಿ ಮೋಹನ್ ಸಾರಂಗ್, ಮಣಿಪಾಲ ಅಕಾಡೆಮಿ ಆಪ್ ಜನರಲ್ ಎಜುಕೇಷನ್‌ನ ಆಡಳಿತಾಧಿಕಾರಿ ಡಾ.ಎಚ್. ಶಾಂತಾರಾಮ್, ಪ್ರೌಢ ಶಿಕ್ಷಣ ನಿರ್ದೇಶಕ ಫಿಲೋಮಿನಾ ಲೋಬೋ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಿರ್ದೇಶಕ ಬೆಳ್ಳ ಶೆಟ್ಟಿ ಉಪಸ್ಥಿತರಿರುವರು ಎಂದು ಪ್ರಕಚಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News