ಉಪ್ಪಳ: ಸ್ಕೂಟರ್ ಗೆ ಕಾರು ಢಿಕ್ಕಿ: ಬೆಂಗಳೂರು ನಿವಾಸಿ ಮೃತ್ಯು.

Update: 2016-10-14 04:25 GMT

ಮಂಜೇಶ್ವರ, ಅ.14: ಸ್ಕೂಟರೊಂದಕ್ಕೆ ಕಾರು ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ಬೆಂಗಳೂರು ನಿವಾಸಿಯೋರ್ವರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪಳದ ನಯಾಬಝಾರ್ ಬಳಿ ಸಂಭವಿಸಿದೆ.

ಮೃತರನ್ನು ಬೆಂಗಳೂರು ನಿವಾಸಿ ಮುಸ್ತಾಕ್ ಹುಸೈನ್(65) ಎಂದು ಗುರುತಿಸಲಾಗಿದೆ. ಇವರೊಂದಿಗಿದ್ದ ಸಹಸವಾರ  ಅಫ್ವಾಕ್ (45) ಎಂಬವರು ಗಾಯಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಶಾಲೆಯೊಂದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಇವರು ಉಪ್ಪಳದಲ್ಲಿರುವ ತನ್ನ ಸಂಬಂಧಿಕರ ಮನೆಗೆ 4 ದಿನಗಳ ಹಿಂದೆ ಆಗಮಿಸಿದ್ದರು.

ಇವರೊಂದಿಗಿದ್ದ ಗಾಯಾಳು ಬೆಂಗಳೂರು ನಿವಾಸಿ ಅಫ್ವಾಕ್ (45) ಎಂಬವರನ್ನು ಉಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಎಚ್ ಸಿ ಶವಾಗಾರದಲ್ಲಿಡಲಾಗಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News