ನ.7ರಂದು ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರುವುದು ನಿಶ್ಚಿತ: ಯಡಿಯೂರಪ್ಪ
ಮಂಗಳೂರು, ಅ.30: ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರ ಜೊತೆ ಬಿಜೆಪಿಗೆ ಸೇರುವ ಬಗ್ಗೆ ಮಾತುಕತೆ ನಡೆಸಿದ್ದು ಅವರು ನ.7 ರಂದು ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದೆಂದು ತಿಳಿಸಿದ್ದು, ಅವರು ಬಿಜೆಪಿ ಸೇರುವುದು ಬಹುಪಾಲು ನಿಶ್ಚಿತವೆಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದರು.
ಇಂದು ಬಿಜೆಪಿ ಜಿಲ್ಲಾ ಕಚೇರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇದೀ ರಾಜ್ಯದಲ್ಲಿ ಅಶಾಂತಿಯ ವಾತವರಣವಿದ್ದು ಟಿಪ್ಪು ಜಯಂತಿ ಆಚರಣೆ ನಡೆಸುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿಯನ್ನು ಆಚರಿಸಬಾರದೆಂದು ಅವರು ಒತ್ತಾಯಿಸಿದರು.
ಸ್ಟೀಲ್ ಬ್ರಿಡ್ಜ್ ನಲ್ಲಿ 500 ಕೋಟಿ ರೂಪಾಯಿಯನ್ನು ಲೂಟಿ ಮಾಡಲು ಯೋಜನೆಯನ್ನು ಸರಕಾರ ರೂಪಿಸಿದೆ. ಕಾಂಗ್ರೆಸ್ ಸರಕಾರ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅವರಿಗೆ ವಿಶ್ವಾಸವಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಸರಕಾರ ಅವಧಿಗಿಂತ ಮೂರು ತಿಂಗಳ ಮುಂಚೆಯೆ ಚುನಾವಣೆಗೆ ಹೋಗಲು ಸಿದ್ದತೆ ನಡೆಸುತ್ತಿದೆ. ಕಾಂಗ್ರೆಸ್ನಲ್ಲಿ ಗೊಂದಲಗಳು ಜಾಸ್ತಿಯಾಗುತ್ತಿದ್ದು ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನವನ್ನು ನಿಶ್ಚಿತವಾಗಿ ಪಡೆಯಲಿದೆ ಎಂದು ತಿಳಿಸಿದರು.