ಸಂಸದರಿಂದ ಸುಳ್ಳು ಹೇಳಿಕೆ: ಕಾಂಗ್ರೆಸ್ ಆರೋಪ

Update: 2016-11-10 14:19 GMT

ಮಂಗಳೂರು, ನ.10: ಬಿ.ಸಿ.ರೋಡಿನಿಂದ ಅಡ್ಡಹೊಳೆವರೆಗಿನ 63 ಕಿ.ಮೀ ದ್ವಿಪಥದ ರಸ್ತೆಯನ್ನು ಚತುಷ್ಪಥ ರಸ್ತೆಯ ಯೋಜನೆ ಯುಪಿಎ 2ರ ಆಡಳಿತದ ಅವಧಿಯಲ್ಲಾಗಿತ್ತು. ಆದರೆ, ಸಂಸದ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ಸುಳ್ಳು ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾರ್ಪೊರೇಟರ್ ಹಾಗು ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಎ.ಸಿ. ವಿನಯರಾಜ್ ಆರೋಪಿಸಿದ್ದಾರೆ.

ಕುಳಾಯಿ ಮೀನುಗಾರಿಕಾ ಜಟ್ಟಿ ನಿರ್ಮಾಣಕ್ಕೆ ಕೇಂದ್ರ ಸರಕಾರ ಶೇ.60 ಮತ್ತು ರಾಜ್ಯಸರಕಾರ ಶೇ.40 ಪಾಲುದಾರಿಕೆಯಲ್ಲಿ ಅಭಿವೃದ್ಧಿ ಪಡಿಸಲು ಯುಪಿಎ ಸರಕಾರ ಯೋಜನೆ ಹಾಕಿಕೊಂಡಿತ್ತು. ಆದರೆ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯ ಸರಕಾರ ಶೇ.60 ಮತ್ತು ಕೇಂದ್ರ ಸರಕಾರ ಶೇ.40 ಎಂದು ನಿಯಮಗಳನ್ನು ಬದಲಾಯಿಸಿದೆ. ಅಷ್ಟೇ ಅಲ್ಲ, ಈ ಯೋಜನೆ ನನೆಗುದಿಗೆ ಬಿದ್ದಿದೆ ಎಂದು ಅವರು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News