ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

Update: 2016-11-23 11:40 GMT

ಪುತ್ತೂರು, ನ.23: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೋರ್ವ ಆತ್ಮಹತ್ಯೆಗೈದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ.

ಪರ್ಪುಂಜ ಗುರಿಕುಮೇರು ನಿವಾಸಿ ಆನಂದ ನಾಯ್ಕ (30) ಎಂಬಾತ ಕಳೆದ ಮೂರು ದಿನಗಳ ಹಿಂದೆ ಕೆಲಸಕ್ಕೆಂದು ಬೆಳಗ್ಗೆ ಮನೆಯಿಂದ ತೆರಳಿದಾತ ಬಳಿಕ ಮನೆಗೆ ವಾಪಸ್ಸಾಗದೆ ನಾಪತ್ತೆಯಾಗಿದ್ದ. ಪುತ್ತೂರಿನ ಕೊರಿಯರ್ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ ಆನಂದ ಸೋಮವಾರ ಬೆಳಗ್ಗೆ 6 ಗಂಟೆಗೆ ಮನೆಯಿಂದ ಹೊರಟಿದ್ದ. ಮೂರು ದಿನಗಳಲ್ಲಿ ಆತನಿಗಾಗಿ ಮನೆ ಮಂದಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಬುಧವಾರ ಮನೆ ಸಮೀಪದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸಂಪ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News