ನ.28;ಕಾಂಗ್ರೆಸ್ ವತಿಯಿಂದ ವಿವಿಧ ತಾಲೂಕು ಕೇಂದ್ರಗಳಲ್ಲಿ ಆಕ್ರೋಶ ದಿನಾಚರಣೆ

Update: 2016-11-26 13:54 GMT

ಮಂಗಳೂರು ,ನ.26: ದೇಶದಲ್ಲಿ 1000ಹಾಗೂ 500 ರೂ.ಗಳನೋಟಗಳನ್ನು ಪೂರ್ವ ತಯಾರಿ ಇಲ್ಲದೆ ಅಮಾನ್ಯ ಮಾಡಿರುವ ಅಸಮರ್ಪಕ ಕ್ರಮದಿಂದ ಜನಸಾಮಾನ್ಯರಿಗೆ ಉಂಟಾಗಿರುವ ಸಮಸ್ಯೆಯ ಕಾರಣಕ್ಕಾಗಿ ವಿವಿಧ ಸಂಘಟನೆಗಳು ಸೋಮವಾರ ಹಮ್ಮಿಕೊಂಡಿರುವ ಭಾರತ್ ಬಂದ್‌ಗೆ ರಾಜ್ಯ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಬೆಂಬಲ ಸೂಚಿಸಲಿದೆ.ನ.28ರಂದು ವಿವಿಧ ತಾಲೂಕು ಕೇಂದ್ರಗಳಲ್ಲಿ ಆಕ್ರೋಶ ದಿನವನ್ನು ಆಚರಿಸಲಿದೆ ಎಂದು ಕೆಪಿಸಿಸಿ ವಕ್ತಾರ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿ ಸೋಜ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಪ್ರಾಣ ಕಳೆದುಕೊಂಡವರಿಗೆ ತಲಾ ಒಂದು ಕೋಟಿ ಪರಿಹಾರ ನೀಡಲು ಆಗ್ರಹ:

ನೋಟು ಅಮಾನ್ಯಗೊಂಡ ಬಳಿಕ ಕಳೆದ 15 ದಿನಗಳಿಂದ 100ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಈ ರೀತಿ ಪ್ರಾಣ ಕಳೆದುಕೊಂಡ ಕುಟುಂಬದವರಿಗೆ ಸರಕಾರ ಒಂದು ಕೋಟಿ ಪರಿಹಾರ ಧನ ನೀಡಬೇಕು ಎಂದು ಐವನ್ ತಿಳಿಸಿದ್ದಾರೆ ಸುದ್ದಿ ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಕೋಡಿಜಾಲ್ ಇಬ್ರಾಹೀಂ, ಕಾಂಗ್ರೆಸ್‌ನ ವಿವಿಧ ಘಟಕಗಳ ಪದಾಧಿಕಾರಿಗಳಾದ ನಝೀರ್ ಬಜಾಲ್,ಶರೀಫ್ ದೇರಳಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News