ಪಿಲಿಕ್ಕೋಡು ಕೃಷಿ ಸಂಶೋಧನಾ ಕೇಂದ್ರದ ಶತಾಬ್ದಿ ಕಾರ್ಯಕ್ರಮ

Update: 2016-11-28 18:38 GMT

ಮಂಜೇಶ್ವರ, ನ.28: ಪಿಲಿಕ್ಕೋಡು ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವ ಕಾರ್ಯ ಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾದ ‘ಸ್ಮತಿ ಸಂಗಮ’ ಕಾರ್ಯಕ್ರಮವನ್ನು ಶಾಸಕ ಪಿ.ಬಿ.ಅಬ್ದುರ್ರಝಾಕ್ ಉದ್ಘಾ ಟಿಸಿದರು. ಬಳಿಕ ಮಾತನಾಡಿದ ಅವರು, ಶತಮಾನೋತ್ಸವ ಕಾರ್ಯಕ್ರಮವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ವರನ್ನು ಗುರುತಿಸಿ, ಅವರನ್ನು ಸನ್ಮಾನಿಸುವ ಈ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ. ಈ ಸಂಗಮದಿಂದ ನಿವೃತ್ತರೆಲ್ಲರೂ ಒಂದೆಡೆ ಸೇರುವಂತಾಗಿದೆ, ಇದೊಂದು ಬದುಕಿನ ಅಪರೂಪದ

  • ಕ್ಷಣ ಎಂದು ಹೇಳಿದರು. ಕಾಸರಗೋಡು ಜಿಪಂ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪಿಲಿಕ್ಕೋಡು ಗ್ರಾಪಂ ಅಧ್ಯಕ್ಷ ಟಿ.ಪಿ.ಶ್ರೀಧರನ್ ಮಾಸ್ತರ್ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸದಸ್ಯ ಟಿ.ಪಿ.ರಾಘವನ್, ಬ್ಲಾಕ್ ಪಂಚಾಯತ್ ಕೆ.ನಾರಾಯಣನ್ ಮಾಸ್ತರ್, ಇ.ವಿ.ಶಶಿಧರನ್ ಮುಂತಾದವರು ಉಪಸ್ಥಿತರಿದ್ದರು. ಪಿಲಿಕ್ಕೋಡು ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಜಯಪ್ರಕಾಶ್ ನಾಕ್ ಸ್ವಾಗತಿಸಿದರು. ಪ್ರೇಮರಾಜನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News