ಬೆಳ್ತಂಗಡಿ: ಕಾಯಿಲೆಯಿಂದ ವ್ಯಕ್ತಿಯ ಆತ್ಮಹತ್ಯೆ

Update: 2016-12-05 16:23 GMT

ಬೆಳ್ತಂಗಡಿ, ಡಿ.5 :  ಉಜಿರೆ ಗ್ರಾಮದ ರೆಂಜಾಳದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 

ಇಲ್ಲಿನ ನಿವಾಸಿ ಚಂದ್ರಶೇಖರ (43) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು.

ಕಾಯಿಲೆಯಿಂದ ಬಳಲುತ್ತಿದ್ದ ಇವರು ಮನನೊಂದು ಭಾನುವಾರ ಸಂಜೆ ಮನೆಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದು , ತಕ್ಷಣ ಇವರನ್ನು ಪತ್ನಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಒಂದು ಮಗುವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News