ಅಕ್ರಮ ಮರಳು ಅಡ್ಡೆಗೆ ಧಾಳಿ

Update: 2016-12-09 18:43 GMT

ಬಂಟ್ವಾಳ, ಡಿ.9: ತಾಲೂಕಿನ ಕರಿಯಂಗಳ ಗ್ರಾಮದ ಪಲ್ಲಿಪಾಡಿ ಎಂಬಲ್ಲಿನ ಅಕ್ರಮ ಮರಳು ಘಟಕಕ್ಕೆ ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್ ನೇತೃತ್ವದಲ್ಲಿ ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಧಾಳಿ ನಡೆಸಿದ್ದಾರೆ.

 ಈ ಸಂದರ್ಭದಲ್ಲಿ ಫಲ್ಗುಣಿ ನದಿ ತೀರದಲ್ಲಿ ಮರಳು ತೆಗೆಯುವ ಕೂಲಿ ಕಾರ್ಮಿಕರಿಗೆ ತಂಗಲು ನಿರ್ಮಿಸಲಾಗಿದ್ದ 5 ಶೆಡ್ಡು ಮತ್ತು ಪರಿಕರಗಳನ್ನು ಕಂದಾಯ ಅಧಿಕಾರಿಗಳು ವಶಪಡಿಸಿದ್ದಾರೆ. ಈ ದಾಳಿ ಕಾರ್ಯಾಚರಣೆಯಲ್ಲಿ ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕೆ., ಗ್ರಾಮ ಲೆಕ್ಕಾಧಿಕಾರಿಗಳಾದ ಪ್ರದೀಪ್, ಪ್ರಶಾಂತ್ ಹಾಗೂ ಸಿಬ್ಬಂದಿ ರೂಪೇಶ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News