ರಾಜ್ಯ ಮಟ್ಟದ ಯುವಜನೋತ್ಸವ ಮುಂದೂಡಿಕೆ

Update: 2016-12-14 16:19 GMT

ಉಡುಪಿ, ಡಿ.14: ಮೈಸೂರಿನಲ್ಲಿ ಡಿ.16ರಿಂದ 18ರವರೆಗೆ ನಡೆಯಬೇಕಿದ್ದ 2016-17ನೇ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಡಿ.23ರಿಂದ 25ರವರೆಗೆ ನಡೆಸಲು ನಿರ್ಧರಿಸಾಗಿದೆ.

ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಭಾಗವಹಿ ಸುವ ಸ್ಪರ್ಧಿಗಳು ಡಿ.23ರ ಅಪರಾಹ್ನ 1:00 ಗಂಟೆಯೊಳಗೆ ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್‌ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ (ದೂರವಾಣಿ:0820-2521324 ಅಥವಾ 9480886467) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News