‘ಹೆತ್ತವರು ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡಿ’

Update: 2016-12-14 19:01 GMT

 ಮೂಡುಬಿದಿರೆ, ಡಿ.14: ವಿದ್ಯಾರ್ಥಿಗಳು ಶಿಸ್ತು ಮತ್ತು ಆದರ್ಶವನ್ನು ಮೈಗೂಡಿಸಿಕೊಂಡರೆ ಯಶಸ್ಸು ಸಾಧ್ಯ. ಶಿಕ್ಷಕರು ಮಕ್ಕಳಿಗೆ ವ್ಯಕ್ತಿತ್ವ ನಿರ್ಮಾಣ ಮತ್ತು ಭವಿಷ್ಯವನ್ನು ರೂಪಿಸುವ ಶಿಕ್ಷಣವನ್ನು ನೀಡಬೇಕು. ಹೆತ್ತವರು ತಮ್ಮ ಮಕ್ಕಳಿಗೆ ಮನೆಯಲ್ಲಿ ಉತ್ತಮ ಸಂಸ್ಕಾರವನ್ನು ನೀಡಿದಾಗ ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯ ಎಂದು ಧರ್ಮಸ್ಥಳದ ಧಮಾ

ಧಿರ್ಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಮೂಡುಬಿದಿರೆಯ ರೋಟರಿ ಎಜುಕೇಶನ್ ಸೊಸೈಟಿಯ ರೋಟರಿ ಪಿಯು ಕಾಲೇಜಿಗೆ ಜ್ಯೋತಿನಗರ ಬಳಿಯಲ್ಲಿ 2.12 ಎಕ್ರೆ ಸ್ಥಳದಲ್ಲಿ ಸುಮಾರು 5 ಕೋ. ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಾಲೇಜು ಕಟ್ಟಡವನ್ನು ಬುಧವಾರ ದಂದು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ರೂಪಿಸಲು ವಿವಿಧ ಕ್ಷೇತ್ರಗಳಲ್ಲಿ ಹಲವಾರು ಅವಕಾಶಗಳಿವೆ. ಈ ಅವಕಾಶಗಳನ್ನು ಪಡೆಯುವ ಗುರಿ ಇರಬೇಕು ಜತೆಗೆ ಗುರಿ ಸಾಧಿಸುವ ಛಲವೂ ಇರಬೇಕೆಂದು ಹೇಳಿದರು. ಪ್ರತಿಯೊಬ್ಬರೂ ಸಮಾನತೆ, ಸಹಭಾಗಿತ್ವ ಮತ್ತು ಸಹಬಾಳ್ವೆಯೊಂದಿಗೆ ಬೆಳೆಯಬೇಕೆಂಬ ಉದ್ದೇಶವನ್ನು ರೋಟರಿ ಸಂಸ್ಥೆಯು ಹೊಂದಿದ್ದು ಅದರಂತೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ

  ್ನು ನೀಡುತ್ತಿದೆ ಎಂದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಾಜಿ ಸಚಿವ ಕಿಮ್ಮನೆ ರತ್ನಾಕರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಜೀವಶಾಸ್ತ್ರ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿರುವ ಒಳ್ಳೆಯತನ, ವಿಶಾಲ ಮನೋಭಾವ ದೊಡ್ಡವರಲ್ಲಿ ಇರಲು ಸಾಧ್ಯವಿಲ್ಲ. ಮಕ್ಕಳಿಗೆ ಪೂರಕವಾದ ವಾತಾವರಣ ನಿರ್ಮಾಣ ನೀಡುವಲ್ಲಿ ನಾವು ವಿಫಲರಾಗಿದ್ದೇವೆ. ಕೇವಲ 100% ಮಾರ್ಕ್ಸ್‌ಗಳಿಗಾಗಿ ಾತ್ರ ಮಕ್ಕಳನ್ನು ಸೀಮಿತಗೊಳಿಸ

ಬೇಡಿ. ಕಡಿಮೆ ಅಂಕಗಳಿಸಿದ ಮಕ್ಕಳಿಗೂ ಭವಿಷ್ಯವಿದೆ ಎಂದರು. ರೋಟರಿ ಸಂಸ್ಥೆಯ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವ ಮಂಗಳೂರು ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎಂ.ಬಿ. ಪುರಾಣಿಕ್ ವಿಜ್ಞಾನ ಪ್ರಯೋಗಾಲಯವನ್ನು, ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ಮುಹಮ್ಮದ್ ಶರೀಫ್ ಭೌತಶಾಸ್ತ್ರ ಪ್ರಯೋಗಾಲಯವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪ್ರತಿಭಾ ಪುರಸ್ಕಾರ:

ರಾಷ್ಟ್ರಮಟ್ಟದಲ್ಲಿ ವಿವಿಧ ರಂಗಗಳಲ್ಲಿ ಸಾಧನೆಗೈದಿರುವ ಶ್ರೇಯಸ್ ಪೈ, ಪ್ರತಿಕ್ಷಾ ಶೆಟ್ಟಿ, ಅಶ್ವಿನ್ ಕೆ., ರಕ್ಷಣ್ಯಾ, ಕೆ.ಎಸ್. ಶಿಬಿ, ರಾಜ್ ಬಂಗೇರಾ ಹಾಗೂ ಜಯಭೀಮ್‌ಅವರನ್ನು ಪುರಸ್ಕರಿಸಲಾಯಿತು. ನೂತನ ಕಟ್ಟಡ ನಿರ್ಮಾಣದಲ್ಲಿ ಸಹಕರಿಸಿರುವ ರವಿಪ್ರಸಾದ್ ಉಪಾಧ್ಯಾಯ, ಪಿ.ಕೆ . ತೋಮಸ್, ಬಾಲಕೃಷ್ಣ, ಸತೀಶ್ ಭಟ್ ಮತ್ತು ರಾಜೇಶ್ ಅವರನ್ನು ಗೌರವಿಸಲಾಯಿತು.

  ಸಂಸ್ಥೆಯ ಆಡಳಿತಾಧಿಕಾರಿ ಶುಭಕರ ಅಂಚನ್, ಪ.ಪೂ.ಕಾಲೇಜಿನ ವಿದ್ಯಾರ್ಥಿ ನಾಯಕ ಲಿಜೋ ಜೇಕಬ್ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ನಾರಾಯಣ ಪಿ. ಎಂ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿನ್ಸೆಂಟ್ ಡಿಕೋಸ್ತಾ ರೋಟರಿ ಮಾತನಾಡಿದರು. ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಂಚಾಲಕ ಡಾ. ಯತಿಕುಮಾರ ಸ್ವಾಮಿ ಗೌಡ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News