ಪಕ್ಷ ತೊರೆಯುವ ಯಾವುದೇ ಪ್ರಸ್ತಾಪ ಇಲ್ಲ: ಸಚಿವ ಪ್ರಮೋದ್ ಸ್ಪಷ್ಟನೆ
Update: 2017-08-11 13:24 GMT
ಉಡುಪಿ, ಆ.11: ಕೆಲವು ಮಾಧ್ಯಮಗಳು, ಪತ್ರಿಕೆಗಳು ವರದಿ ಮಾಡಿರುವಂತೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರುವ ಯಾವುದೇ ಪ್ರಸ್ತಾಪ ನನ್ನ ಮುಂದೆ ಇಲ್ಲ ಎಂದು ರಾಜ್ಯ ಮೀನುಗಾರಿಕೆ, ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳ ವರದಿಗಳು ದುರುದ್ದೇಶ ಪೂರಕವಾಗಿದ್ದು, ಸತ್ಯಕ್ಕೆ ದೂರವಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಮೇಲಿರುವ ನನ್ನ ವಿಶ್ವಾಸ ಮತ್ತು ನಿಷ್ಠೆ ಅಚಲವಾಗಿದೆ ಎಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.