ಆ.14: ಕಾವ್ಯಾ ಸಾವಿನ ಸಮಗ್ರ ತನಿಖೆಗೆ ಆಗ್ರಹಿಸಿ ಜಾಥಾ

Update: 2017-08-11 13:57 GMT

ಉಡುಪಿ, ಆ.11: ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಅಸಹಜ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಿ ನಿಜಾಂಶ ಬಹಿರಂಗ ಪಡಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಉಡುಪಿ ಜಿಲ್ಲೆ ವತಿಯಿಂದ ಆ.14ರಂದು ಬೆಳಗ್ಗೆ 10:30ಕ್ಕೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಉಡುಪಿ ಜೋಡುಕಟ್ಟೆಯಿಂದ ಕ್ಲಾಕ್ ಟವರ್‌ವರೆಗೆ ಮೌನ ಪ್ರತಿಭಟನಾ ಜಾಥ ಮತ್ತು ಪ್ರತಿಭಟನಾ ಸಭೆಯು ನಡೆಯಲಿದ್ದು, ಬಳಿಕ ರಜತಾದ್ರಿಗೆ ವಾಹನ ಜಾಥ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ಕೆ.ರಮೇಶ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಮಹಿಳಾ ಸಂಘಟನೆಗಳು ಹಾಗೂ ಆಶ್ರಯದಾತ ಆಟೋರಿಕ್ಷಾ ಸಂಘಟನೆಯವರು ಭಾಗವಹಿಸಲಿರುವರು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಕರುಣಾಕರ ಪೂಜಾರಿ, ನಿತ್ಯಾನಂದ ಅಮೀನ್, ಬಿ.ಸುಧಾಕರ ರಾವ್, ಎಸ್.ಎಸ್.ತೋನ್ಸೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News