ಉದ್ಯಾವರ: ಉಚಿತ ಸಮವಸ್ತ್ರ ವಿತರಣೆ
ಉದ್ಯಾವರ, ಆ.14: ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ 71ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗ್ರಾಮದ ಪ್ರಾಥಮಿಕ ಶಾಲಾ 7ನೇ ತರಗತಿಯ ವಿದ್ಯಾರ್ಥಿಗಳಿಗೆ, ಪ್ರೌಢ ಶಾಲೆಯ 10ನೇ ತರಗತಿ ಹಾಗೂ ಪಿಯುಸಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಗ್ರಾಮದ ಅರ್ಹ ಗ್ರಾಮಸ್ಥರಿಗೆ ವೈಧ್ಯಕೀಯ ನೆರವು, ಅರ್ಹ ವಿದ್ಯಾರ್ಥಿ ಗಳಿಗೆ ಉಚಿತ ಸಮವಸ್ತ್ರ ವಿತರಣಾ ಸಮಾರಂಭ ಆ.15ರಂದು ಅಪರಾಹ್ನ 2 ಕ್ಕೆ ಉದ್ಯಾವರ ಫ್ಸಾ ಅಡಿಟೋರಿಯಂನಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಕಾಪು ಶಾಸಕ ವಿನಯ ಕುಮಾರ್ ಸೊರಕೆ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ್ ಕಣಿವೆ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ದುಗ್ಗಪ್ಪ ಕಜೇಕಾರ್, ನ್ಯಾಯವಾದಿ ಹರೀಶ್ ಶೆಟ್ಟಿ ಪಾಂಗಾಳ, ದಾನಿ ಅಬ್ದುಲ್ ಜಲೀಲ್ ಸಾಹೇಬ್ ಮತ್ತು ಉದ್ಯಾವರ ಗ್ರಾಪಂ ಅದ್ಯಕ್ಷೆ ಸುಗಂಧಿ ಶೇಖರ್ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.