ವಿಕಾಸ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

Update: 2017-08-15 10:41 GMT

ಮಂಗಳೂರು, ಆ. 15: ವಿಕಾಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಡಿ. ಶ್ರೀಪತಿ ರಾವ್ ಧ್ವಜಾರೋಹಣಗೈದರು. ಬಳಿಕ ಮಾತನಾಡಿದ ಅವರು ಎಲ್ಲ ಕ್ಷೇತ್ರದಲ್ಲೂ ಭಾರತ ಮುಂಚೂಣಿಯಲ್ಲಿದೆ. ಭಾರತೀಯರು ಚೀನಾದಿಂದ ವಸ್ತುಗಳನ್ನು ತರಿಸಿ ನಮ್ಮ ಸಂಪತ್ತು ಚೀನಾ ಸೇರುವಂತೆ ಮಾಡುತ್ತಿದ್ದೇವೆ. ನಾವು ಭಾರತದಲ್ಲಿ ಉತ್ಪನ್ನಗೊಂಡ ವಸ್ತುಗಳನ್ನು ಖರೀದಿಸಬೇಕು ಎಂದರು ಕರೆ ನೀಡಿದರು.

 ವೇದಿಕೆಯಲ್ಲಿ ಮಾಜಿ ಸಚಿವ ಹಾಗೂ ಕಾಲೇಜಿನ ಮುಖ್ಯಸ್ಥರೂ ಆಗಿರುವ ಜೆ.ಕೃಷ್ಣ ಪಾಲೆಮಾರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗಸ್ಪರ್ಧೆಯಲ್ಲಿ ಸಾಧನೆಗೈದ ವಿದ್ಯಾರ್ಥಿ ಶಿವನಗೌಡ ಹರನಾಳ್‌ನನ್ನು ಈ ಸಂದರ್ಭ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಿಕಾಸ್ ಎಜುಕೇಶನ್ ಟ್ರಸ್ಟ್‌ನ ಟ್ರಸ್ಟಿಗಳಾದ ಜೆ. ಕೊರಗಪ್ಪ, ಸೂರಜ್ ಕಲ್ಯ, ವಿಕಾಸ್ ಎಜುಸೊಲ್ಯುಶನ್ ನಿರ್ದೇಶಕ ಡಾ. ಅನಂತ್‌ಪ್ರಭು ಜಿ., ಪ್ರಾಂಶುಪಾಲ ಟಿ. ರಾಝಾರಾಂ, ವಿಕಾಸ್ ವಿದ್ಯಾಸಂಸ್ಥೆಯ ಸಮನ್ವಯಾಧಿಕಾರಿ ಪಾರ್ಥಸಾರಥಿ ಪಾಲೆಮಾರ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪ್ರಥಮ್ ಮುರನಾಳ್ ಸ್ವಾಗತಿಸಿದರು. ಸೃಷ್ಟಿ ಎಚ್. ವಂದಿಸಿದರು. ಸೃಷ್ಟಿ ಮತ್ತು ಅನೂಪ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News