ಯುನಿವೆಫ್: ದ.ಕ. ಘಟಕದ ವತಿಯಿಂದ ಸ್ವಾತಂತ್ರ್ಯೋತ್ಸವ

Update: 2017-08-16 04:30 GMT

ಮಂಗಳೂರು, ಆ. 15: ಯುನಿವೆಫ್ ದ.ಕ. ಘಟಕದ ವತಿಯಿಂದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣವು ಫಳ್ನೀರ್ ನ ದಾರುಲ್ ಇಲ್ಮ್ ನಲ್ಲಿ ವಿಜ್ರಂಭಣೆಯಿಂದ ಜರಗಿತು.

ಮುಖ್ಯ ಅತಿಥಿಗಳಾಗಿ ಸಕಲೇಶಪುರದ ರಕ್ಷಿದಿ ಎಸ್ಟೇಟ್ ನ ಇಸ್ಮಾಯಿಲ್, ಮುಸ್ಲಿಮ್ ಸೆಂಟ್ರಲ್ ಕಮಿಟಿ ಅಧ್ಯಕ್ಷ ಅಲಿ ಹಸನ್ ಮತ್ತು ಎಸ್ ಡಿ ಪಿ ಐ ಜಿಲ್ಲಾ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಭಾಗವಹಿದ್ದರು.

ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಮುಖ್ಯ ಭಾಷಣಕಾರರಾಗಿ ಭಾಗವಹಿದ್ದರು. ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿ ಇಲ್ಯಾಸ್ ತುಂಬೆ ಅಧ್ಯಕ್ಷತೆ ವಹಿಸಿದ್ದರು. ಯೂನುಸ್ ಪರ್ವೇಝ್ ಕಿರಾತ್ ಪಠಿಸಿದರು. ಅಡ್ವೊಕೇಟ್ ಸಿರಾಜುದ್ದೀನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನವಾಝ್ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News