ಕಣ್ಣೂರು ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2017-08-17 17:16 GMT

ಮಂಗಳೂರು, ಆ.17: ಕಣ್ಣೂರು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಮಹಿಳಾ ಪದವಿ ಪೂರ್ವ ಕಾಲೇಜಿನ ವತಿಯಿಂದ ಸ್ವಾತಂತ್ಯ್ರೋತ್ಸವವನ್ನು ಆಚರಿಸಲಾಯಿತು.

ಲಂಡನ್ ಅಮೇರಿಕನ್ ಸಿಟಿ ಕಾಲೇಜು, ದುಬಾ ಇದರ ನಿರ್ದೇಶಕ ಡಾ. ಮುಹಮ್ಮದ್ ಕಾಪು   ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ  ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಉಡುಪಿ ಇದರ ವ್ಯವಸ್ಥಾಪಕ ಸಪ್ವಾನ್  ಪ್ರತಿಭಾ ಕಾರಂಜಿ ಸ್ಪರ್ಧಿಗಳ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಣೆಗೈದರು.

ಕಾರ್ಯಕ್ರಮದಲ್ಲಿ ಕಣ್ಣೂರು ಚಾರಿಟೇಬಲ್ ಟ್ರಸ್ಟ್  ಉಪಾಧ್ಯಕ್ಷ ಕೆ.ಬಿ ಅಬ್ದುಲ್ ರಹಿಮಾನ್ ಹಾಜಿ, ಪ್ರಧಾನ ಕಾರ್ಯದರ್ಶಿ ಉಮರಬ್ಬ, ಕಾರ್ಯದರ್ಶಿ ಅಬ್ದುಲ್ ಮಜೀದ್ ಹಾಜಿ ಸಿತಾರ್, ಸದಸ್ಯ ಬಿ. ಮುಹಮ್ಮದ್, ಸಂಚಾಲಕ ರಿಯಾರ್ ಕಣ್ಣೂರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ವೀಣಾ ಗಂಗೊಳ್ಳಿ ಸ್ವಾಗತಿಸಿದರು ಹಾಗೂ ಶಾಲಾ ವಿದ್ಯಾರ್ಥಿ ಅಫ್ನಾನ್ ವಂದಿಸಿದರು.  ಶಿಕ್ಷಕಿ ಜಯಶ್ರೀ ಪ್ರಮಾಣ ಪತ್ರ ವಾಚಿಸಿದರು. ಶಾಲಾ ವಿದ್ಯಾರ್ಥಿ ಸುನೈಫ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News