ಮಂಗಳೂರಿನಲ್ಲಿ ಕೆಪಿಎಸ್ಸಿ ಗೆಜೆಟೆಡ್ ಪರೀಕ್ಷೆ
Update: 2017-08-20 17:03 GMT
ಮಂಗಳೂರು, ಆ.20: ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಸರಕಾರದ ವಿವಿಧ ಗಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ರವಿವಾರ ಮಂಗಳೂರಿನಲ್ಲಿ ನಡೆಸಿತು. ನಗರದಲ್ಲಿ 12 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 6 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದರು.
ಅಭ್ಯರ್ಥಿಗಳಿಗೆ ಮೊಬೈಲ್ ಅಥವಾ ಡಿಜಿಟಲ್ ವಾಚ್ ಬಳಕೆಗೆ ನಿರ್ಬಂಧ ಹೇರಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗ್ರೂಪ್ ‘ಎ’ ಅಧಿಕಾರಿಗಳು ವೀಕ್ಷಕರಾಗಿ ಹಾಗೂ ಗ್ರೂಪ್ ‘ಬಿ’ ದರ್ಜೆ ಅಧಿಕಾರಿಗಳು ರೂಟ್ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು.