ಉಡುಪಿ: ಬಸ್‌ಗಳಿಗೆ ಬಾಗಿಲು ಅಳವಡಿಸಲು ಸೂಚನೆ

Update: 2017-09-03 12:45 GMT

ಉಡುಪಿ, ಸೆ.3: ಉಡುಪಿ ನಗರಸಭಾ ವ್ಯಾಪ್ತಿಯೊಳಗೆ ಸಂಚರಿಸುವ ಬಸ್ ಗಳನ್ನು ಹೊರತುಪಡಿಸಿ ಇತರ ಎಲ್ಲಾ ಬಸ್‌ಗಳಲ್ಲಿ ಕಡ್ಡಾಯವಾಗಿ ಬಾಗಿಲು ಗಳನ್ನು ಆಳವಡಿಸಿಕೊಳ್ಳುವಂತೆ ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸೂಚನೆ ನೀಡಿದೆ.

ಈ ಸೂಚನೆಯನ್ನು ಬಸ್‌ಗಳಲ್ಲಿ ಅನುಷ್ಠಾನಗೊಳಿಸುವಂತೆ ಎಲ್ಲಾ ಬಸ್ ಮಾಲಕರಿಗೆ ತಿಳಿಸಲಾಗಿದೆ. ಇದನ್ನು ಜಿಲ್ಲೆಯ ಎಲ್ಲಾ ಬಸ್ಸಿನವರು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದಲ್ಲಿ ಅಂತಹ ಬಸ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ಕೆ.ಎ.ರಾಮಕೃಷ್ಣ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News