ಉಡುಪಿ ಸ್ಕೌಟ್ಸ್- ಗೈಡ್ಸ್‌ಗೆ ರಾಜ್ಯ ಮಟ್ಟದ ಪ್ರಶಸ್ತಿ

Update: 2017-09-13 16:35 GMT

ಉಡುಪಿ, ಸೆ.13: ಕಳೆದ ಸಾಲಿನಲ್ಲಿ (2016-17) ರಾಜ್ಯಮಟ್ಟದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಜಿಲ್ಲಾ ಸಂಸ್ಥೆಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ನೀಡುವ ವಾರ್ಷಿಕ ಪ್ರಶಸ್ತಿಯಲ್ಲಿ ಉಡುಪಿ ಜಿಲ್ಲಾ ತಂಡ ದ್ವಿತೀಯ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದ 99ನೇ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಜಸ್ಟೀಸ್ ಕೆ.ಶಂಕರ್‌ನಾರಾಯಣ ರಾವ್ ಪರ್ಯಾಯ ಫಲಕವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಅರ್.ಸಿಂಧ್ಯ ಅವರು ಪ್ರಶಸ್ತಿ ಫಲಕ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಕೊಂಡಜ್ಜಿ ಷಣ್ಮೂಖಪ್ಪ, ಗೋ.ರು ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ ಉಪಸ್ಥಿತರಿದ್ದರು.

ಜಿಲ್ಲಾ ಪದಾಧಿಕಾರಿಗಳಾದ ಶಾಂತಾ ವಿ.ಆಚಾರ್ಯ, ಜಿಲ್ಲಾ ಮುಖ್ಯ ಆಯುಕ್ತ ಡಾ. ವಿಜಯೇಂದ್ರ ವಸಂತ್, ಜಿಲ್ಲಾ ಸ್ಕೌಟ್ಸ್ ಆಯುಕ್ತ ಅನಂದ್ ಬಿ ಅಡಿಗ, ಕೊಗ್ಗ ಗಾಣಿಗ, ಪ್ರೊ.ಉದಯ ಶೆಟ್ಟಿ ಕೆ, ಪಾರ್ವತಿ ಇವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News