​ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2017-09-17 15:48 GMT

ಕಾಪು, ಸೆ.17: ಕಳೆದ ಸುಮಾರು 10 ವರ್ಷಗಳಿಂದ ಉಬ್ಬಸ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಟಪಾಡಿ ಕಲ್ಲಾಪು ನಿವಾಸಿ ಅಪ್ಪಿ ಪೂಜಾರ್ತಿ(80) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಸೆ.16ರಂದು ಮಧ್ಯಾಹ್ನ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ವೈಯಕ್ತಿಕ ಕಾರಣದಿಂದ ಮನನೊಂದು ಸೆ.13ರಂದು ರಾತ್ರಿ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಈದು ಗ್ರಾಮದ ರಾಮೆಟ್ಟು ನಿವಾಸಿ ನಾರಾಯಣ ಭಟ್(65) ಎಂಬವರು ಸೆ.17ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಮುದ್ರಾಡಿ ಗ್ರಾಮದ ಬಲ್ಲಾಡಿ ಹಂಪೋಡಿ ನಿವಾಸಿ ಮೊಂಟು ಪೂಜಾರಿ(90) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.16ರಂದು ರಾತ್ರಿ ವೇಳೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News