ಎಸ್ ಡಿ ಪಿ ಐ ಬೆಳ್ತಂಗಡಿ ವತಿಯಿಂದ ರಕ್ತದಾನ ಶಿಬಿರ
Update: 2017-09-18 05:05 GMT
ಬೆಳ್ತಂಗಡಿ, ಸೆ. 18: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಬೆಳ್ತಂಗಡಿ ನಗರ ಸಮಿತಿ ಹಾಗೂ ಕೆಎಂಸಿ ಮಂಗಳೂರು ಇದರ ಸಹಯೋಗದಲ್ಲಿ ರವಿವಾರ ಜೆಎಂಎಫ್ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ರಕ್ತದಾನ ಶಿಬಿರದಲ್ಲಿ 108 ಮಂದಿ ರಕ್ತದಾನ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ನಗರ ಸಮಿತಿ ಅಧ್ಯಕ್ಷ ರಶೀದ್ ಬೆಳ್ತಂಗಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ, ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಲ್ಫೋನ್ಸ್ ಪ್ರಾಂಕೋ, ಕೆಎಂಸಿ ಆಸ್ಪತ್ರೆಯ ವೈದ್ಯ ಅಧಿಕಾರಿ ಡಾ. ಕಾವ್ಯ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಇದರ ಅಧ್ಯಕ್ಷ ಮುಸ್ತಫಾ ಪೆರ್ನೆ, ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ನವಾಝ್ ಶರೀಫ್ ಉಪಸ್ಥಿತರಿದ್ದರು.
ಅಕ್ಬರ್ ಬೆಳ್ತಂಗಡಿ ಸ್ವಾಗತಿಸಿ, ಮುತ್ತಲಿಬ್ ವಂದಿಸಿದರು. ನಿಝಾಮ್ ಕಾರ್ಯಕ್ರಮ ನಿರೂಪಿಸಿದರು.