ಸೆ.21ರಿಂದ ಪೂಜಾ ಮಹೋತ್ಸವ

Update: 2017-09-20 12:10 GMT

ಮಂಗಳೂರು, ಸೆ.20: ಕೊಲ್ಯ ಶ್ರೀ ಸ್ವಾಮಿ ರಮಾನಂದಾಶ್ರಮ ಸೇವಾ ಸಮಿತಿ ವತಿಯಿಂದ ನವರಾತ್ರಿ ಪೂಜಾ ಮಹೋತ್ಸವವು ಸೆ. 21ರಿಂದ 30ರ ತನಕ ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಸಮಿತಿ ಅಧ್ಯಕ್ಷ ಕೆ. ಮಹಾಬಲ ಶೆಟ್ಟಿ ಹೇಳಿದರು.

ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 24ರಂದು ಸಂಜೆ 6:30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ ಸಂಜೆ 4ರಿಂದ 5.30ರ ತನಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ಆಯೋಜಿಸಲಾಗಿದೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಹರಿಕಥಾ ಪರಿಷತ್ ಟ್ರಸ್ಟ್‌ನ ಸಹಕಾರದೊಂದಿಗೆ ಸೆ.21ರಿಂದ 28ರ ತನಕ ಹರಿಕಥಾ ಸಪ್ತಾಹ ಪ್ರತಿದಿನ ಸಂಜೆ 6ರಿಂದ 8 ಗಂಟೆಯ ತನಕ ಜರಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಜಿ. ವಾಸುದೇವ ಗೌಡ, ಕಾರ್ಯದರ್ಶಿಗಳಾದ ಸಂತೋಷ್‌ಕುಮಾರ್ ಟಿ., ನಾರಾಯಣ ಕುಂಪಲ, ಬಾಲಕೃಷ್ಣ ಕೊಲ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News