ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ
Update: 2017-09-22 17:18 GMT
ಮಂಗಳೂರು, ಸೆ. 22: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ನಡೆಸಿ ವಂಚಿಸಿದ ಆರೋಪದಲ್ಲಿ ಯುವಕನೋರ್ವನ ಮೇಲೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಉಪ್ಪಿನಂಗಡಿಯ ರಾಜೇಶ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿರುವ ಈತ, ನಗರದ ಯುವತಿಯೋರ್ವಳ ಪರಿಚಯವಾಗಿ, ಆಕೆಯೊಂದಿಗೆ ಸಲುಗೆ ಹೊಂದಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿದ್ದಾನೆಂದು ಆರೋಪಿಸಲಾಗಿದೆ.
ಯುವತಿ ನೀಡಿದ ದೂರಿನಂತೆ ಯುವಕನ ವಿರುದ್ಧ ಅತ್ಯಾಚಾರ , ವಂಚನೆ , ಬೆದರಿಕೆ ಪ್ರಕರಣಗಳನ್ನು ದಾಖಲಿಸಿಲಾಗಿದೆ.