ಅ. 3: ಬ್ಯಾರಿ ಭಾಷಾ ದಿನಾಚರಣೆ

Update: 2017-09-30 11:39 GMT

ಬಂಟ್ವಾಳ, ಸೆ. 30: ಬ್ಯಾರಿ ಸಾಹಿತ್ಯ ಪರಿಷತ್, ದಫ್ ಎಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅ. 3ರಂದು ಮಧ್ಯಾಹ್ನ 2.30ಕ್ಕೆ ಬ್ಯಾರಿ ಭಾಷಾ ದಿನಾಚರಣಾ ಕಾರ್ಯಕ್ರಮವು ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಲಿದೆ.

ಸಾಹಿತಿ ಚಂದ್ರಶೇಖರ ಪಾತೂರು ಉದ್ಘಾಟಿಸಲಿದ್ದು, ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಜಿಲ್ಲಾಧ್ಯಕ್ಷೆ ಎಂ. ಪ್ರೇಮಿ ಫರ್ನಾಂಡೀಸ್, ಹಿದಾಯ ಫೌಂಡೇಶನ್ ಸಂಚಾಲಕ ಹಾಜಿ ಜಿ. ಮುಹಮ್ಮದ್ ಹನೀಫ್, ಕಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ಬಿ.ಮೂಡ ಸ.ಪೂ.ಕಾಲೇಜ್ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ, ಹಯಾತುಲ್ ಇಸ್ಲಾಂ ಅನುದಾನಿತ ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ಬಿ. ರಾಮಚಂದ್ರ ರಾವ್, ತುಳು ಸಾಹಿತ್ಯ ಅಕಾಡಮಿ ಸದಸ್ಯ ಎ. ಗೋಪಾಲ ಅಂಚನ್, ಬ್ಯಾರಿ ಸಾಹಿತ್ಯ ಪರಿಷತ್ ಸದಸ್ಯ ಮುಹಮ್ಮದ್ ಝಕರಿಯ ಕಲ್ಲಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News