ಅ.1: ಕಾಂಗ್ರೆಸ್ ಕಾರ್ಯಕರ್ತರ ಸಭೆ
Update: 2017-09-30 14:37 GMT
ಉಡುಪಿ, ಸೆ. 30: ಉಡುಪಿ ನಗರಸಭೆಯ 31ನೇ ಬೈಲೂರು ವಾರ್ಡ್ನ ಬೂತ್ ಸಂಖ್ಯೆ 194ರ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಅ.1ರಂದು ಸಂಜೆ 4.30ಕ್ಕೆ ಉಡುಪಿ ಚಿಟ್ಪಾಡಿ ಶಾರದಾಂಬ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಅಧ್ಯಕ್ಷತೆ ವಹಿಸಲಿರುವರು. ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಭಾಗ ವಹಿಸಲಿರುವರು ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.