‘ಹೊಳಪು’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ, ಸೆ.30: ಕೋಟತಟ್ಟು ಗ್ರಾಪಂ, ಕೋಟ ಡಾ.ಶಿವರಾಮ ಕಾರಂತ ಪ್ರತಿಷ್ಠಾನದ ವತಿಯಿಂದ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾ ಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ‘ಹೊಳಪು -2017’ ಇದರ ಆಮಂತ್ರಣ ಪತ್ರಿಕೆಯನ್ನು ಪೇಜಾವರ ಶ್ರೀವಿಶ್ವೇಶ್ವರ ತೀರ್ಥ ಸ್ವಾಮೀಜಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಗ್ರಾಪಂ ಅಧ್ಯಕ್ಷ ಎಚ್.ಪ್ರಮೋದ್ ಹಂದೆ, ಜಿಪಂ ಅಧ್ಯಕ್ಷ ದಿನಕರ ಬಾಬು, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ.ಕುಂದರ್, ನ್ಯಾಯ ವಾದಿ ಟಿ.ಬಿ.ಶೆಟ್ಟಿ, ಪ್ರತಿಷ್ಠಾನದ ಸದಸ್ಯ ಸುಬ್ರಾಯ ಆಚಾರ್ಯ ಮಣೂರು, ಕೋಟತಟ್ಟು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ, ಪತ್ರಕರ್ತ ರಾದ ಯು.ಎಸ್.ಶೆಣೈ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಹರೀಶ್ ಶೆಟ್ಟಿ, ವಿವೇಕ ಅಮೀನ್, ಕೋಟತಟ್ಟು ಗ್ರಾಪಂ ಸದಸ್ಯರಾದ ಸತೀಶ್ ಬಾರಿಕೆರೆ, ರಘು ತಿಂಗಳಾಯ, ವಾಸು ಪೂಜಾರಿ, ಜಯಪ್ರಕಾಶ್, ಯಡ್ತಾಡಿ ಗ್ರಾಪಂ ಸದಸ್ಯ ಅಲ್ತಾರು ಗೌತಮ್ ಹೆಗ್ಡೆ, ಕಾರಂತ ಥೀಂ ಪಾರ್ಕ್ ಮಾಧ್ಯಮ ಪ್ರಚಾರ ಸಂಚಾಲಕ ಅಶ್ವಥ್ ಆಚಾರ್ಯ ಎಡಬೆಟ್ಟು ಉಪಸ್ಥಿತರಿದ್ದರು.