ಮಹಿಳೆಗೆ ಕಿರುಕುಳ: ಆರೋಪಿ ಸೆರೆ

Update: 2017-10-02 15:50 GMT

ಮಂಗಳೂರು, ಅ. 2: ಮಹಿಳೆಯೋರ್ವರಿಗೆ ಅವಾಚ್ಯ ಶಬ್ದದಿಂದ ನಿಂದಿಸಿ, ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯೊಬ್ಬನನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕುಂಜತ್ತಬೈಲ್ ವಾಟರ್ ಟ್ಯಾಂಕ್ ಬಳಿ ನಿವಾಸಿ ಓಂಪ್ರಕಾಶ್ ಶೆಟ್ಟಿ (48) ಬಂಧಿತ ಆರೋಪಿ. ಈತ ಮೂಲತಃ ತೀರ್ಥಹಳ್ಳಿ ನಿವಾಸಿಯಾಗಿದ್ದು, ನಗರದಲ್ಲಿ ಕೆಲಸ ಮಾಡುತ್ತಿದ್ದ. ರವಿವಾರ ರಾತ್ರಿ 10:30ರ ಸುಮಾರಿಗೆ ಕುಂಜತ್ತಬೈಲ್ ಕೆಎಚ್‌ಬಿ ಕಾಲನಿಯಲ್ಲಿ ಪತಿಯೊಂದಿಗೆ ವಾಸಿಸುತ್ತಿದ್ದ ಮಹಿಳೆಯೊಬ್ಬರ ಮನೆಯ ಕಂಪೌಂಡ್‌ನೊಳಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ, ಆಕೆಯ ಮಾನಭಂಗಕ್ಕೆ ಯತ್ನಿಸಿದ್ದಾನೆಂದು ಆರೋಪಿಸಲಾಗಿದೆ. ಮಹಿಳೆ  ನೀಡಿದ ದೂರಿನಂತೆ ಕಾವೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News