ಬೆಳ್ತಂಗಡಿ: ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ

Update: 2017-10-02 17:10 GMT

ಬೆಳ್ತಂಗಡಿ, ಅ.2: ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ನಗರ ಪಂ. ಬೆಳ್ತಂಗಡಿ, ಪತ್ರಕರ್ತರ ಸಂಘ ಬೆಳ್ತಂಗಡಿ, ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಬೆಳ್ತಂಗಡಿ ಶಾಖೆ, ರೋಟರಿ ಕ್ಲಬ್ ಬೆಳ್ತಂಗಡಿ, ಭಾರತ್ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್ ಸಂಸ್ಥೆ ಬೆಳ್ತಂಗಡಿ, ಮಂಜುಶ್ರೀ ಜೇಸಿಐ ಬೆಳ್ತಂಗಡಿ, ರೋಟರಿ ಆ್ಯನ್ಸ್‌ ಕ್ಲಬ್ ಬೆಳ್ತಂಗಡಿ, ರಿಕ್ಷಾ ಮಾಲಕ ಮತ್ತು ಚಾಲಕರ ಸಂಘ ಸಂತೆಕಟ್ಟೆ, ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ಮತ್ತು ಔಷಧಿ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ರಾಷ್ಟ್ರಪಿತ ಮಹತ್ಮ ಗಾಂಧಿ ಜಯಂತಿ ಪ್ರಯುಕ್ತ ಸೋಮವಾರ ಬೆಳ್ತಂಗಡಿ ಪೇಟೆಯಿಂದ ನ್ಯಾಯಾಲಯದ ಆವರಣದ ತನಕ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಸತೀಶ್‌ಎಸ್. ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಸೇವಿಯರ್ ಪಾಲೆಲಿ ವಹಿಸಿ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ನಗರ ಪಂ. ಅಧ್ಯಕ್ಷ ಮುಗುಳಿ ನಾರಾಯಣರಾವ್, ಉಪಾಧ್ಯಕ್ಷ ಜಗಧೀಶ ಡಿ, ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್ ಬಳಂಜ, ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಬೆಳ್ತಂಗಡಿ ಶಾಖೆಯ ಪ್ರಬಂಧಕ ಎಚ್. ಶೀನಪ್ಪ ನಾಕ್, ರೋಟರಿ ಕ್ಲಬ್ ಅಧ್ಯಕ್ಷ ಸುಧೀರ್ ಪ್ರಭು, ಭಾರತ್ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್ ಅಧ್ಯಕ್ಷ ರಮಾನಂದ ಸಾಲ್ಯಾನ್, ಮಂಜುಶ್ರೀ ಜೇಸಿಸ್ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ರೋಟರಿ ಆ್ಯನ್ಸ್‌ಕ್ಲಬ್ ಅಧ್ಯಕ್ಷೆ ವೈಷ್ಣವಿ ಪ್ರಭು, ಸಿರೋ ಮಲಬಾರ್‌ ಕ್ಯಾಥೋಲಿಕ್ ಅಸೋಸಿಯೇಶನ್ ಅಧ್ಯಕ್ಷ ಸೆಬೆಸ್ಟಿಯನ್ ಕೆ.ಕೆ, ಸಂತೆಕಟ್ಟೆ ರಿಕ್ಷಾ ಮಾಲಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಬಾಬು ಗೌಡ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ, ಜನಜಾಗೃತಿ ವೇದಿಕೆಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

ವಕೀಲರ ಸಂಘದ ಕಾರ್ಯದರ್ಶಿ ಮನೋಹರ್‌ ಕುಮಾರ್ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News