ಝುಬೈರ್ ಹತ್ಯೆ ಖಂಡಿಸಿ ಮುಕ್ಕಚೇರಿಯಲ್ಲಿ ಪ್ರತಿಭಟನೆ
Update: 2017-10-06 18:02 GMT
ಮಂಗಳೂರು, ಅ. 6: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮುಕ್ಕಚೇರಿ ನಿವಾಸಿ ಝುಬೈರ್ ಕೊಲೆಯನ್ನು ಖಂಡಿಸಿ ಡಿವೈಎಫ್ಐ ಉಳ್ಳಾಲ ಸಮಿತಿ ವತಿಯಿಂದ ಮುಕ್ಕಚೇರಿ ಜಂಕ್ಷನ್ ಬಳಿ ಪ್ರತಿಭಟನೆ ನಡೆಯಿತು.
ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮಾತನಾಡಿ, ಮಾದಕ ವಸ್ತುಗಳ ವಿರುದ್ಧ ಧ್ವನಿ ಎತ್ತಿದ್ದ ಝುಬೈರ್ರನ್ನು ಮಾದಕ ವಸ್ತು ವ್ಯಸನಿಗಳೇ ಹತ್ಯೆ ಮಾಡಿದ್ದಾರೆ ಎಂದರು. ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ರಫೀಕ್ ಹರೇಕಳ, ಉಳ್ಳಾಲ ವಲಯಾಧ್ಯಕ್ಷ ಜೀವನ್ರಾಜ್ ಕುತ್ತಾರ್, ಕಾರ್ಯದರ್ಶಿ ರಝಾಕ್ ಮೊಂಟೆಪದವು, ಉಪಾಧ್ಯಕ್ಷ ನಿತಿನ್ ಕುತ್ತಾರ್, ಸಿಪಿಎಂ ವಲಯ ಕಾರ್ಯದರ್ಶಿ ಕೃಷ್ಣಪ್ಪ ಸಾಲ್ಯಾನ್, ಮಾಜಿ ಜಿ.ಪಂ. ಸದಸ್ಯೆ ಪದ್ಮಾವತಿ ಶೆಟ್ಟಿ, ಕಾರ್ಮಿಕ ಮುಖಂಡರಾದ ಮಾರಪ್ಪ, ಬಾಬುಪಿಲಾರ್, ಹರೇಕಳ ಗ್ರಾ.ಪಂ. ಸದಸ್ಯ ಅಶ್ರಫ್ ಮೊದಲಾದವರು ಉಪಸ್ಥಿತರಿದ್ದರು.