ಸಚಿವ ರೈ ವಿರುದ್ಧ ನ್ಯಾಯಾಲಯಕ್ಕೆ ದೂರು : ವಿಚಾರಣೆ ಅ.16ಕ್ಕೆ ಮುಂದೂಡಿಕೆ

Update: 2017-10-10 16:44 GMT

ಮಂಗಳೂರು, ಅ. 10: ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಆರೋಪದಲ್ಲಿ ಸಚಿವ ಬಿ.ರಮಾನಾಥ ರೈ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನ್ಯಾಯಾಲಯದಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಮಂಗಳವಾರ ಮಂಗಳೂರು 2ನೆ ಜೆಎಂಎಫ್ ಸಿ ನ್ಯಾಯಾಲಯವು ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಅ.16ಕ್ಕೆ ಮುಂದೂಡಿದೆ.

ಸಚಿವ ರೈ ಅವರು ಸೆ.22ರಂದು ಅಸೈಗೋಳಿಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಭಾಷಣ ಮಾಡಿ ಸೂಲಿಬೆಲೆಯವರ ಬಗ್ಗೆ ಮಾನಹಾನಿಕಾರಕ ಶಬ್ದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಅವರು ರೈ ಅವರ ವಿರುದ್ಧ ನ್ಯಾಯಾಲಯಕ್ಕೆ ದೂರು ನೀಡಿದ್ದರು.

ಈ ಬಗ್ಗೆ ಮಂಗಳವಾರ ನ್ಯಾಯಾಲಯ ರಹೀಂ ಉಚ್ಚಿಲ ಅವರಿಂದ ಹೇಳಿಕೆ ಪಡೆದುಕೊಂಡಿದ್ದಲ್ಲದೆ, ಅದಕ್ಕೆ ಪೂರಕವಾದ ದಾಖಲೆ, ಸಾಕ್ಷಿಯ ಹೇಳಿಕೆಯನ್ನು ಪಡೆದುಕೊಂಡಿದೆ. ಬಳಿಕ ಮುಂದಿನ ವಿಚಾರಣೆಯನ್ನು ಅ.16ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News