ಮೂವರು ಬಿಜೆಪಿ ಮುಖಂಡರ ವಿರುದ್ಧ ಮಾನನಷ್ಟ ಮೊಕದ್ದವೆು ಹೂಡುತ್ತೇನೆ: ಐವನ್ ಡಿಸೋಜ
Update: 2017-10-11 06:35 GMT
ಮಂಗಳೂರು, ಅ.11: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರನ ವಿರುದ್ಧ ಬಿಜೆಪಿ ಮಾಡುತ್ತಿರುವ ಕ್ಷುಲ್ಲಕ ಆರೋಪಗಳಿಗೆ ಸಂಬಂಧಿಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ.
ಮಂಗಳೂರಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವನ್, ಡಿನೋಟಿಫೈಗೆ ಸಂಬಂಧಿಸಿ ಬಿಜೆಪಿ ಮುಖಂಡ, ಮೇಲ್ಮನೆ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಗೋ ಮಧುಸೂದನ್ ಮೊದಲಾದವರು ಮಾಡಿರುವುದು ವೃಥಾರೋಪವಾಗಿದೆ. ಈ ಆರೋಪಗಳಿಗೆ ಸಂಬಂಧಿಸಿ ಬಿ.ಜೆ.ಪುಟ್ಟಸ್ವಾಮಿ, ಗೋ ಮಧುಸೂದನ ಸೇರಿದಂತೆ ಮೂವರ ವಿರುದ್ಧ ಮಂಗಳೂರು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಕೆ.ಅಶ್ರಫ್, ಮಾಜಿ ಕಾರ್ಪೊರೇಟರ್ ನಾಗೇಂದ್ರ, ನಝೀರ್ ಬಜಾಲ್, ಅಮೃತ್ ಕದ್ರಿ, ಹೇಮನಾಥ ಶೆಟ್ಟಿ ಕಾವು ಉಪಸ್ಥಿತರಿದ್ದರು.