ನೀರಿನ ತೊಟ್ಟಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Update: 2017-10-12 13:24 GMT
ಉಡುಪಿ, ಅ.12: ಆದಿ ಉಡುಪಿ ಮೀನು ಮಾರುಕಟ್ಟೆ ಬಳಿ ಸುಮಾರು 45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ನೀರು ಸಂಗ್ರಹ ತೊಟ್ಟಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.
ಮೃತಪಟ್ಟು ನಾಲ್ಕು ದಿನ ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ವಾರಸುದಾರರು ನಗರ ಠಾಣೆಯನ್ನು ಸಂಪರ್ಕಿಸಬಹುದು. ಸಾವಿಗೆ ಸ್ವಷ್ಟ ಕಾರಣ ತಿಳಿದು ಬಂದಿಲ್ಲ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಳೆತು ನಾರುತ್ತಿದ್ದ ಶವವನ್ನು ನೀರಿನ ತೊಟ್ಟಿಯಿಂದ, ಸಮಾಜಸೇವಕ ನಿತ್ಯಾನಂದ ಒಳಕಾಡು, ಮೀನು ಮಾರುಕಟ್ಟೆಯ ವ್ಯಾಪಾರಿಗಳು ಮೇಲಿತ್ತಿದ್ದಾರೆ. ಮೃತ ವ್ಯಕ್ತಿಯು ನೀಲಿ ಬಣ್ಣದ ಚೌಕುಳಿ ಉದ್ದ ತೊಳಿನ ಅಂಗಿ, ಕಂದು ಬಣ್ಣದ ಪ್ಯಾಂಟು ಧರಿಸಿದ್ದಾರೆ. ಮೃತದೇಹ ಸಾಗಿಸುವಲ್ಲಿ ಸಾಮಾಜಿಕ ಕಾರ್ಯ ಕರ್ತರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ, ತಾರಾನಾಥ್ ಮೇಸ್ತ, ಪೊಲೀಸ್ ಇಲಾಖೆಗೆ ಸಹಕರಿಸಿದ್ದಾರೆ.