ರಾಷ್ಟ್ರೀಯ ಆಯುರ್ವೇದ ದಿನಾಚರಣೆ
Update: 2017-10-13 17:13 GMT
ಉಡುಪಿ, ಅ.13: ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅ.17 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಇವುಗಳ ಆಶ್ರಯದಲ್ಲಿ ನಡೆಯಲಿದೆ ಎಂದು ಆಯುಷ್ ಅಧಿಕಾರಿ ಡಾ.ಅಲಕನಂದ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದಾರೆ. ನೋವು ನಿವಾರಣೆಗೆ ಆಯುರ್ವೇದ ಚಿಕಿತ್ಸೆ ಎಂಬ ಘೋಷ ವಾಕ್ಯದಡಿ ಉಚಿತ ನೋವು ನಿವಾರಣಾ ಶಿಬಿರ ಜಿಲ್ಲಾ ಆಯುಷ್ ಕಚೇರಿ ಆವರಣದಲ್ಲಿ ನಡೆಯಲಿದೆ. 23ರಿಂದ ಒಂದು ವಾರ ಕಾಲ ಸಂಧಿವಾತ ಚಿಕಿತ್ಸಾ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಲು ಇಲಾಖೆ ಕೋರಿದೆ.