ಜುಗಾರಿ: ಆರು ಮಂದಿ ಆರೋಪಿಗಳ ಬಂಧನ
Update: 2017-10-16 11:36 GMT
ಬಂಟ್ವಾಳ,ಅ. ೧೫: ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿನ ಗುಡ್ಡೆಯಲ್ಲಿ ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಜಗದೀಶ ಮೂಲ್ಯ, ರವೀಂದ್ರ ಪೂಜಾರಿ, ಅನ್ವರ್ ಶರೀಫ್, ನವೀನ್, ಕರುಣಾಕರ, ಹಂಝ ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ಸೈ ಪ್ರಸನ್ನ ಕುಮಾರ್ ಎಚ್ ನೇತೃತ್ವದಲ್ಲಿ ದಾಳಿ ನಡೆಸಿ ಜುಗಾರಿಯಲ್ಲಿ ನಿರತರಾಗಿದ್ದ ಆರು ಮಂದಿಯನ್ನು ಬಂಧಿಸಿ, ಸುಮಾರು 1.50 ಲಕ್ಷ ರೂ., ವಾಹನ ಸಹಿತ ಮೊಬೈಲ್ ಗಳನ್ನು ವಶಕ್ಕೆ ಪಡೆದು ಕೊಂಡಿದ್ದು, ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿದ್ದಾರೆ.