ಕೊಲ್ಲರಕೋಡಿ: ಹಳೆ ವಿದ್ಯಾರ್ಥಿ ಸಂಘದಿಂದ ಸ್ವಚ್ಛತಾ ಕಾರ್ಯಕ್ರಮ

Update: 2017-10-25 11:37 GMT

ಕೊಣಾಜೆ, ಅ. 23: ನರಿಂಗಾನ ಗ್ರಾಮದ ಕೊಲ್ಲರಕೋಡಿಯ ದ.ಕ. ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮವು ರವಿವಾರ ನಡೆಯಿತು.

ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನೆತ್ತಿಲ ಪದವುನಿಂದ ಮುರತಗುಂಡಿಯವರೆಗಿನ ರಸ್ತೆ ಬದಿಯಲ್ಲಿದ್ದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವಾಝ್, ಗೌರವಾಧ್ಯಕ್ಷ ಸಿದ್ದೀಕ್ ಪಾರೆ, ಉಪಾಧ್ಯಕ್ಷ ವಿವೇಕಾನಂದ ರೈ, ಗೌರವ ಸಲಹೆಗಾರ ಪ್ರೇಮಾನಂದ ರೈ, ನರಿಂಗಾನ ಪಂಚಾಯತ್ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಉಪಾಧ್ಯಕ್ಷೆ ನಳಿನಾಕ್ಷಿ ಶೆಟ್ಟಿ, ಸದಸ್ಯರಾದ ಅಬ್ದುಲ್ ಖಾದರ್, ಸುಜಾತ, ಪ್ರಧಾನ ಸಂಘಟನಾ ಕಾರ್ಯದರ್ಶಿ ಅಶ್ರಫ್ ಎಸ್ ಎಚ್ ಹಾಗೂ ಇತರರು ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News