ಮಾದಕ ದ್ರವ್ಯ ವಿರೋಧಿ ಅಭಿಯಾನಕ್ಕೆ ಚಾಲನೆ
Update: 2017-10-25 16:48 GMT
ಮಂಗಳೂರು, ಅ. 25: ಎನ್ಎಸ್ಯುಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಅ.24ರಿಂದ ನವೆಂಬರ್ 10ರವರೆಗೆ ನಡೆಯಲಿರುವ ಮಾದಕ ದ್ರವ್ಯ ವಿರೋಧಿ ಅಭಿಯಾನದ ಪೋಸ್ಟರ್ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಬಿಡುಗಡೆಗೊಳಿಸಿದರು.
ಈ ಸಂದರ್ಭ ಸಚಿವರಾದ ಬಿ. ರಮಾನಾಥ ರೈ, ಎಚ್.ಸಿ. ಮಹದೇವಪ್ಪ, ಡಿ.ಕೆ. ಶಿವಕುಮಾರ್, ಯು.ಟಿ.ಖಾದರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ಜಿಲ್ಲಾ ಎನ್ಎಸ್ಯುಐ ಅಧ್ಯಕ್ಷ ಅಬ್ದುಲ್ಲಾ ಬಿನ್ನು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುಹಮ್ಮದ್ ಸವಾದ್, ಮುಹಮ್ಮದ್ ಅವುಫ್, ರಾಜ್ಯ ಪ್ರಧಾನ ಕಾರ್ಯದರ್ಶಿ ರೂಪೇಶ್ ರೈ, ಕಾರ್ಯದರ್ಶಿ ಫಾರೂಕ್ ಹಾಗೂ ಆಸ್ಟನ್ ಸಿಕ್ವೇರಾ, ಶೌಹಾದ್ ಗೂನಡ್ಕ, ರುಷೈದ್, ಸುಹಾನ್ ಆಳ್ವ, ಸಿರಾಜ್ ಗುದುರು ಉಪಸ್ಥಿತರಿದ್ದರು.