ಶಿವಸೇನೆಯ ಮಾಜಿ ಕಾರ್ಪೋರೇಟರ್ ಹತ್ಯೆ
Update: 2018-01-08 05:56 GMT
ಮುಂಬೈ, ಜ.8: ಶಿವಸೇನೆಯ ಮಾಜಿ ಕಾರ್ಪೋರೇಟರ್ರನ್ನು ಕಳೆದ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಉಪನಗರ ಕಾಂದಿವಲಿಯ ಸಮತನಗರದಿಂದ ಎರಡು ಬಾರಿ ಕಾರ್ಪೋರೇಟರ್ ಆಗಿ ಆಯ್ಕೆಯಾಗಿದ್ದ 62ರ ಹರೆಯದ ಅಶೋಕ್ ಸಾವಂತ್ ರಾತ್ರಿ 11ರ ಸುಮಾರಿಗೆ ಸ್ನೇಹಿತರನ್ನು ಭೇಟಿಯಾಗಿ ಮನೆಗೆ ವಾಪಸಾಗುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಶೋಕ್ರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟೊತ್ತಿಗೆ ಅವರು ಮೃತಪಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಾವಂತ್ ಕಳೆದ ಕೆಲವು ವರ್ಷಗಳಿಂದ ಕೇಬಲ್ ಟಿವಿ ಉದ್ಯಮಿದಲ್ಲಿ ತೊಡಗಿಸಿಕೊಂಡಿದ್ದರು.