ತಮಿಳುನಾಡಿಗೆ ಹಿಂದಿರುಗಿದ ಮಾಜಿ ನ್ಯಾಯಮೂರ್ತಿ ಕರ್ಣನ್

Update: 2018-01-11 15:09 GMT

ಚೆನ್ನೈ, ಜ. 11: ನ್ಯಾಯಾಂಗ ನಿಂದನೆ ಅಪರಾಧದಲ್ಲಿ ಶಿಕ್ಷೆ ಅನುಭವಿಸಿ ಇತ್ತೀಚೆಗೆ ಬಿಡುಗಡೆಯಾಗಿರುವ ಕೋಲ್ಕತ್ತಾ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಸಿ.ಎಸ್. ಕರ್ಣನ್ ಶುಕ್ರವಾರ ಇಲ್ಲಿಗೆ ಆಗಮಿಸಿದ್ದಾರೆ.

ಕಾರಾಗೃಹದಿಂದ ಬಿಡುಗಡೆಗೊಂಡು ಮೂರು ವಾರಗಳ ಬಳಿಕ ಕರ್ಣನ್ ಖಾಸಗಿ ವಿಮಾನದಲ್ಲಿ ಇಲ್ಲಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ‘‘ಕಾರಾಗೃಹದ ನಿಮ್ಮ ಅನುಭವದ ಬಗ್ಗೆ ಪುಸ್ತಕ ಬರೆಯುತ್ತೀರಾ’’ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕರ್ಣನ್, ಈ ಬಗ್ಗೆ ಪರಿಗಣಿಸಲಾಗುವುದು ಎಂದಿದ್ದಾರೆ.

 ನ್ಯಾಯಾಂಗ ನಿಂದನೆ ಹಿನ್ನೆಲೆಯಲ್ಲಿ ಕಳೆದ ವರ್ಷ ಮೇ 9ರಂದು ಸುಪ್ರೀಂ ಕೋರ್ಟ್ ಕರ್ಣನ್‌ಗೆ ಆರು ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿತ್ತು. ಡಿಸೆಂಬರ್ 20ರಂದು ಅವರು ಕಾರಾಗೃಹದಿಂದ ಬಿಡುಗಡೆಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News