ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರು ಮೃತ್ಯು

Update: 2018-01-16 07:37 GMT

ದಾವಣಗೆರೆ, ಜ.16: ಕೆರೆಗೆ ಈಜಲು ಇಳಿದ ಬಾಲಕರಿಬ್ಬರು ಮುಳುಗಿ ಮೃತಪಟ್ಟ ದಾರುಣ ಘಟನೆ ದಾವಣಗೆರೆ ಹೊರವಲಯದ ಆವರಗೆರೆ ಕೆರೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಸ್ಥಳೀಯ ನಿವಾಸಿಗಳಾದ ಧ್ರುವ(10) ಹಾಗೂ ಗಿರೀಶ್(10) ಮೃತ ಬಾಲಕರಾಗಿದ್ದಾರೆ. ಇವರಿಬ್ಬರು ಸ್ನಾನ ಮಾಡಲು ಕೆರೆಗೆ ಇಳಿದ ವೇಳೆ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಮೇಲೆತ್ತಲಾಗಿದ್ದು, ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಬಗ್ಗೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News