ಲಾರಿ - ಬೈಕ್ ಢಿಕ್ಕಿ : ಬೈಕ್ ಸವಾರರಿಬ್ಬರು ಮೃತ್ಯು

Update: 2018-01-27 17:00 GMT

ಹೊನ್ನಾಳಿ,ಜ.27:ಗೂಡ್ಸ್ ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊನ್ನಾಳಿ ಪಟ್ಟಣದ ಟಿಬಿ ವೃತ್ತದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಗೋವಿನಕೋವಿ ಗ್ರಾಮದ ನಿವಾಸಿಗಳಾದ ಆದರ್ಶ (24), ಗಿರೀಶ್ (26) ಸಾವನ್ನಪ್ಪಿದವರು. ಇನ್ನೊಬ್ಬ ಪ್ರದೀಪ್ (25) ಎಂಬುವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಸಂಜೆ ಹೊನ್ನಾಳಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿಪ್ರತಿಷ್ಟಾಪನಾ ಕಾರ್ಯಕ್ರಮವನ್ನು ಮುಗಿಸಿ ವಾಪಾಸಾಗುತ್ತಿದ್ದಾಗ ಪಟ್ಟಣದ ಟಿಬಿ ವೃತ್ತದ ಬಳಿ ಗೂಡ್ಸ್ ಲಾರಿಗೆ ಈ ಮೂವರು ಯುವಕರಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಪ್ರದೀಪ್ ಗಂಭೀರವಾಗಿ ಗಾಯಗೊಂಡಿದ್ದು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News