ಬಣಕಲ್: ಭತ್ತದ ಹುಲ್ಲು ಸಾಗಿಸುತ್ತಿದ್ದ ಪಿಕ್ ಅಪ್ ವಾಹನಕ್ಕೆ ಬೆಂಕಿ

Update: 2018-02-03 16:25 GMT

ಬಣಕಲ್, ಫೆ.3: ಭತ್ತದ ಹುಲ್ಲು ಕೊಂಡೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಪಿಕ್ ಅಪ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಹಾರದಲ್ಲಿ ನಡೆದಿದೆ.

ಪಿಕ್ ಅಪ್ ವಾಹನದಲ್ಲಿ ಮೂಡಿಗೆರೆಯಿಂದ ಮಂಗಳೂರಿಗೆ ಭತ್ತದ ಹುಲ್ಲು ಕೊಂಡೊಯ್ಯುವ ವೇಳೆ ಈ ಘಟನೆ ನಡೆದಿದೆ. ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ವಾಹನವನ್ನು ಹಳ್ಳದೆಡೆಗೆ ಸಾಗಿಸಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದ್ದಾನೆ.

ಬೆಂಕಿಯಿಂದಾಗಿ ಪಿಕ್ ಅಪ್ ವಾಹನಕ್ಕೆ ಹಾನಿಯಾಗಿದ್ದು, ಭತ್ತದ ಹುಲ್ಲು ಸಂಪೂರ್ಣ ನಾಶವಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News