ಮೈಸೂರು: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜಾಗೃತಿ ಜಾಥಾ
Update: 2018-02-05 15:58 GMT
ಮೈಸೂರು,ಫೆ.5: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಸಂಜೀವಿನಿ ಸಮಾನ ಮನಸ್ಕರ ವೇದಿಕೆ ವತಿಯಿಂದ ಜಾಥಾ ಆಯೋಜಿಸಲಾಗಿದ್ದು, ಕೆ.ಆರ್.ಆಸ್ಪತ್ರೆಯ ಬಳಿ ಸೋಮವಾರ ಚಾಲನೆ ನೀಡಲಾಯಿತು.
ಈ ಸಂದರ್ಭ ಮಾತನಾಡಿದ ಕೆ.ಆರ್.ಆಸ್ಪತ್ರೆಯ ವೈದ್ಯರು, ಇಂದಿನ ಯುವಜನತೆ ಸಿಗರೇಟ್ ಗಳಿಗೆ ಬಲಿಯಾಗುತ್ತಿದ್ದಾರೆ. ತಂಬಾಕು, ಸಿಗರೇಟ್ ಸೇವನೆಗಳಿಂದ ಕ್ಯಾನ್ಸರ್ ಬರಲಿದೆ. ಅದಕ್ಕಾಗಿ ದುಶ್ಚಟಗಳಿಂದ ದೂರವಿರಿ. ಕ್ಯಾನ್ಸರ್ ಬರದಂತೆ ತಡೆಯಿರಿ ಎಂದರು.
ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ನಂತರ ಜೆ.ಕೆ.ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ವೈದ್ಯಕೀಯ ಕಾಲೇಜು ನಿರ್ದೇಶಕಿ ಡಾ.ಎಸ್.ರಾಧಾಮಣಿ, ಡಾ.ಸುರೇಶ್, ಡಾ.ಕಿರಣ್, ಡಾ.ಸಿಂಚನಾ ಮತ್ತಿತರರು ಉಪಸ್ಥಿತರಿದ್ದರು. ಜಾಥಾದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.