ಸಿದ್ದಾಪುರ: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮೃತ್ಯು
Update: 2018-02-12 17:18 GMT
ಸಿದ್ದಾಪುರ, ಫೆ.12: ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಠಾಣಾ ವ್ಯಾಪ್ತಿಯ ಹಚ್ಚಿನಾಡು ಕಾಫಿ ತೋಟದಲ್ಲಿ ಸಂಭವಿಸಿದೆ.
ನಂಜನಗೂಡು ಮೂಲದ ಕಾರ್ಮಿಕ ಸ್ವಾಮಿ (21) ಮೃತ ವ್ಯಕ್ತಿಯಾಗಿದ್ದು, ಕಬ್ಬಿಣದ ಏಣಿಯ ಮೂಲಕ ತೋಟದಲ್ಲಿ ಕಾಳು ಮೆಣಸು ಕೊಯ್ಯುತ್ತಿದ್ದ ಸಂದರ್ಭ ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಏಣಿ ತಗುಲಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುದ್ದಾರೆ.
ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.