ಚೆನ್ನೈ: ಕಾರ್ತಿ ಚಿದಂಬರಂರನ್ನು ಬಂಧಿಸಿದ ಸಿಬಿಐ

Update: 2018-02-28 04:57 GMT

ಹೊಸದಿಲ್ಲಿ, ಫೆ.28: ಐಎನ್ ಎಕ್ಸ್ ಹಣಚಲುವೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ ಕಾರ್ತಿ ಚಿದಂಬರಂ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಬಂಧನಕ್ಕೂ ಮುನ್ನ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ ಎಂದು ತನಿಖಾ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಿ ಪ್ರಯಾಣದಿಂದ ಹಿಂದಿರುಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾರ್ತಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

“ವಂಚನೆ ಪ್ರಕರಣದಲ್ಲಿ ಅವರ ಪಾತ್ರವಿದೆ ಎನ್ನುವುದಕ್ಕೆ ನಮ್ಮ ಬಳಿ ಬಲವಾದ ಸಾಕ್ಷಿಗಳಿವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 16ರಂದು ಕಾರ್ತಿಯವರ ಸಿಎ ಎಸ್. ಭಾಸ್ಕರರಾಮನ್ ಅವರನ್ನು ದಿಲ್ಲಿಯ ಫೈವ್ ಸ್ಟಾರ್ ಹೊಟೇಲೊಂದರಿಂದ ಬಂಧಿಸಲಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News