ತಲ್ವಾರ್ ದಂಪತಿ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

Update: 2018-03-08 16:29 GMT

ಹೊಸದಿಲ್ಲಿ, ಮಾ.8: ಆರುಷಿ-ಹೇಮರಾಜ್ ಕೊಲೆ ಪ್ರಕರಣದಲ್ಲಿ ತಲ್ವಾರ್ ದಂಪತಿಯನ್ನು ಖುಲಾಸೆಗೊಳಿಸಿರುವ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

2008ರಲ್ಲಿ ನಡೆದ ಆರುಷಿ ಹಾಗು ಹೇಮರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅಲಹಬಾದ್ ಹೈಕೋರ್ಟ್ 2017ರ ಅಕ್ಟೋಬರ್ 12ರಂದು ರಾಜೇಶ್ ಹಾಗು ನೂಪುರ್ ತಲ್ವಾರ್ ನಿರ್ದೋಷಿ ಎಂದು ತೀರ್ಪು ನೀಡಿತ್ತು.  ಕಳೆದ ವರ್ಷ ಡಿಸೆಂಬರ್ ನಲ್ಲಿ ಹೇಮರಾಜ್ ರ ಪತ್ನಿ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News