ಉತ್ತರಾಖಂಡದಲ್ಲಿ ಅಂಬೇಡ್ಕರ್ ಪ್ರತಿಮೆ ದ್ವಂಸ
Update: 2018-03-09 13:40 GMT
ಹರಿದ್ವಾರ, ಮಾ.9: ಉತ್ತರಾಖಂಡದ ಹರಿದ್ವಾರದಲ್ಲಿರುವ ಕನ್ಹಾವಾಲಿ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ದ್ವಂಸಗೊಳಿಸಿದ ಘಟನೆ ನಡೆದಿದ್ದು ಗ್ರಾಮದಲ್ಲಿ ಉದ್ರಿಕ್ತ ಪರಿಸ್ಥಿತಿ ನೆಲೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರತಿಮೆಯನ್ನು ಸ್ಥಾಪಿಸಿರುವ ಜಮೀನಿನ ಒಡೆತನದ ಬಗ್ಗೆ ಗ್ರಾಮದ ಇಬ್ಬರ ಮಧ್ಯೆ ವಿವಾದವಿತ್ತು ಮತ್ತು ಈ ಹಿಂದೆಯೂ ಅಂಬೇಡ್ಕರ್ ಪ್ರತಿಮೆಗೆ ಹಾನಿ ಎಸಗಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕತ್ತಲೆಯಲ್ಲಿ ಆಗಮಿಸಿದ ದುಷ್ಕರ್ಮಿಗಳು ಪ್ರತಿಮೆಯನ್ನು ಹಾನಿಗೊಳಿಸಿ ಪಲಾಯನ ಮಾಡಿದ್ದಾರೆ. ದುಷ್ಕರ್ಮಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ. ಘಟನೆಯ ಬಳಿಕ ಸ್ಥಳದಲ್ಲಿ ಉದ್ರಿಕ್ತ ಪರಿಸ್ಥಿತಿ ನೆಲೆಸಿದ್ದು ಸ್ಥಳೀಯರು ಪ್ರತಿಭಟನೆ ನಡೆಸಿದರು. ಪೊಲೀಸ್ ಇನ್ಸ್ಪೆಕ್ಟರ್ ಭಗವಾನ್ ಮೆಹರ್ ಹಾಗೂ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಕೌಸ್ತುಭ್ ಮಿಶ್ರ ಸ್ಥಳಕ್ಕೆ ಭೇಟಿ ನೀಡಿದ್ದು ಪ್ರತಿಭಟನಾಕಾರರ ಮನವೊಲಿಸಿದರು.